25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

ಮಚ್ಚಿನ: ನ್ಯೂ ಫ್ರೆಂಡ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ. 26 ರಂದು ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಶರರಾದ ಹರ್ಷ ಸಂಪಿಗೆತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ, ಗೋಪಾಲ್ ಪೂಜಾರಿ ಕೊಲಾಜೆ , ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ನಾರಾಯಣ ಪೂಜಾರಿ ಅವರು ಸಭಾ ಅಧ್ಯಕ್ಷ ಸ್ಥಾನ ವಹಿಸಿದರು ಲ್ಯಾನ್ಸಿ ಪಾಯಸ್ ಸ್ವಾಗತಿಸಿ ಧನ್ಯವಾದ ನೀಡಿದರು.

ನಂತರ ವಿವಿಧ ಕ್ರೀಡಾಕೂಟ ನಡೆಯಿತು. ಸಂಜೆ ಬೈಕ್ ರೇಸ್ ಹಗ್ಗಜಗಾಟ ಗೋವಿಂದ ಸ್ಪರ್ಧೆ ಹಾಗೂ ವಿಶೇಷ ಆಕರ್ಷಣೆಯಾಗಿ ಬಳ್ಳಮಂಜ ಪೇಟೆಯಿಂದ ಹಟ್ಟಿ ಗೋವಿಂದ ಕೃಷ್ಣ ನೀಲೋತ್ಸವ ನೀರ ಓಕುಳಿ ಆಟದೊಂದಿಗೆ ಕ್ರೀಡಾಂಗಣಕ್ಕೆ ಭವ್ಯ ಮೆರವಣಿಗೆ ನಡೆಯಿತು. ಸಂಜೆ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಪದ್ಮರಾಜ್ ಆರ್ ಪೂಜಾರಿ ಮಂಗಳೂರು. ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಟಿ ವಿ ಶ್ರೀಧರ್ ರಾವ್ ಪೇಜಾವರ ಪಾರೆಂಕಿ ರೋಟರಿ ಕ್ಲಬ್ ಇದರ ಅಧ್ಯಕ್ಷರಾದ ನಿತ್ಯಾನಂದ ಬಿ. ಹೆಜ್ಜಾರು ಚಲನಚಿತ್ರ ನಾಟಕ ಭಗವತ್ ಆಲ್ವಾ ದೀಪಕ್ ಕೋಟ್ಯಾನ್ ಸುಂಕದಕಟ್ಟೆ. ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷರಾದ ನಿತೀಶ್ ಹೆಚ್ ಕೋಟ್ಯಾನ್ ಜಿ ಆರ್ ಬಾರ್ ಮಾಲೀಕರಾದ ರಾಘವೇಂದ್ರ ಪ್ರಸಾದ್ . ಲಿಯೊ ರೋಡ್ರಿಗೆ ಉದ್ಯಮಿ ಆಕಾಶ್ ಎಚ್. ಪ್ರವೀಣ್. ಅಶೋಕ್ ನಾವುಡ ಸೀತಾರಾಮ್ ಬಂಗೇರ ಇವರು ಉಪಸ್ಥಿತರಿದ್ದರು.

ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಕಾರ್ಯದರ್ಶಿ ನಿಶಾಂತ್, ಕೋಶಾಧಿಕಾರಿ ಶ್ರವಣ್, ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್ ಲ್ಯಾನ್ಸ್ ಪಾಯಸ್ , ಹರ್ಷ ಬಳ್ಳಮಂಜ, ಸದಾಶಿವ ಹೆಗ್ಡೆ, ಜಯರಾಮ್, ಸಂದೀಪ್ ಕುಂದರ್ ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಪ್ರೌಢಶಾಲೆಯಲ್ಲಿ ಕಲಿಕೆ ಹಾಗೂ ಕ್ರೀಡೆ ಕೋಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಂಘ ಪ್ರಾರಂಭದಿಂದ 30ನೇ ವರ್ಷದವರೆಗೂ ಅಧ್ಯಕ್ಷರಾಗಿದ್ದ ಅಧ್ಯಕ್ಷರುಗಳಿಗೆ ಗೌರವಿಸಲಾಯಿತು.

ಪ್ರಮೋದ್ ಕುಮಾರ್ ಸ್ವಾಗತಿಸಿ ಸದಾಶಿವ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು ಹರ್ಷ ಬಳ್ಳಮಂಜ ಧನ್ಯವಾದ ಕೋರಿದರು

Related posts

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
error: Content is protected !!