25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ ಆ. 31 ರವರೆಗೆ ಹೆಚ್ಚಿನ ತನಿಖೆಗಾಗಿ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಾಸರಗೋಡು ತಾಲೂಕಿನ ಕುಂಬ್ರಾಜೆ ಗ್ರಾಮದ ಒಡಬ್ಬಳ ನಿವಾಸಿಯಾಗಿರುವ ಅಳಿಯ ರಾಘವೇಂದ್ರ ಕೆದಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಲಾಗಿತ್ತು‌.

ಆ.27 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ ಕೇಳಿದ್ದು ನ್ಯಾಯಾಧೀಶರು ಐದು ದಿನ ಧರ್ಮಸ್ಥಳ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ‌.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!