April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ಪ್ರಾರಂಭೋತ್ಸವ ಹಾಗೂ ರೋವರ್ & ರೇಂಜರ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಅದ್ದೂರಿಯಾಗಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ & ಗೈಡ್ಸ್, ಕರ್ನಾಟಕ ಇದರ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಇವರು ನೆರವೇರಿಸಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ನ ಪಾತ್ರವನ್ನು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿಯಾದ ಪ್ರಮೀಳಾ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ದಳಗಳು ಉತ್ತಮವಾಗಿ ಮುಂದುವರೆದು ಕೀರ್ತಿಯನ್ನು ಗಳಿಸಲಿ ಎಂಬುದಾಗಿ ಶುಭಹಾರೈಸಿದರು.
ಇನ್ನೋರ್ವ ಅತಿಥಿಗಳಾದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ರವಿ ಎಂ ಎನ್ ಮಾತನಾಡಿ ಜೀವನದಲ್ಲಿ ಮೌಲ್ಯಗಳನ್ನು ರೂಪಿಸುವಲ್ಲಿ ಸ್ಕೌಟಿಂಗ್ ಗೈಡಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಚಂದ್ರಮತಿ ಘಟಕಗಳಿಗೆ ಶುಭಹಾರೈಸಿದರು.


ಸರಸ್ವತಿ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ಶ್ರೀಜಾ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಲೀಡರ್ ಶ್ರೀಮತಿ ವಸಂತಿ ನಿರೂಪಿಸಿ, ಫ್ಲಾಕ್ ಲೀಡರ್ ಶ್ರೀಮತಿ ಭಾರತಿ ಡಿ ಸ್ವಾಗತಿಸಿ, ಗೈಡ್ ಕ್ಯಾಪ್ಟನ್ ಶ್ರೀಮತಿ ರೇವತಿ ಧನ್ಯವಾದಗೈದರು. ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ, ಸ್ಕೌಟ್ ಮಾಸ್ಟರ್ ಬಾಲಕೃಷ್ಣ, ಕಬ್ ಮಾಸ್ಟರ್ ಶ್ರೀಮತಿ ಪ್ರೇಮ ಸಹಕರಿಸಿದರು.

Related posts

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!