September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ 3ನೇ ವರ್ಷದ ಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮ ಶ್ರೀ ರಾಮ ಶಿಶು ಮಂದಿರ ಆವರಣದಲ್ಲಿ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ ಮೊಸರು ಕುಡಿಕೆ, ಶಿಶು ಮಂದಿರದ ಪುಟಾಣಿಗಳಿಂದ ಸಾoಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಹಾಗೂ 2025ರಲ್ಲಿ ನಡೆಯುವ ಸಂಘದ 25 ನೇ ವರ್ಷದ ಬೆಳ್ಳಿ ಹಬ್ಬ ಲೋಗೋ ಅನಾವರಣ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಆ 26 ರಂದು ನಡೆಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಶಿಶುಮಂದಿರ ಯು ಜಿ ರಾಧಾ ಭಟ್, ಸಂಚಾಲಕರಾದ ರಮೇಶ್ ನೆಕ್ಕರಾಜೆ, ನಿವೃತ್ತ ಶಿಕ್ಷಕರರಾದ ಸತ್ಯಶಂಕರ ಭಟ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖoಡಿಗ , ಮಾತೃ ಮಂಡಳಿ ಅಧ್ಯಕ್ಷೆ ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಹಲವಾರು ವರ್ಷ ಮೊಗ್ರು ಗ್ರಾಮದಲ್ಲಿ ಸೇವೆ ಸಲ್ಲಿಸಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಪವರ್ ಮ್ಯಾನ್ ಸಂದೀಪ್ ಎಂ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪಡೆದ ಯುವಸಾಹಿತಿ ಚಂದ್ರಹಾಸ ಕುಂಬಾರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

Related posts

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!