July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅನರ್ಹರಾಗಿದ್ದು ಈ ಸಮಸ್ಯೆಯ ಬಗ್ಗೆ ಪರಿಶೀಲಿಸಿ ಸದ್ರಿ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಿ ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ರವರು ಕಂದಾಯ ಸಚಿವ ಕೃಷ್ಣಭೈರೇ ಗೌಡರಿಗೆ ಮನವಿಯನ್ನು ಸಲ್ಲಿಸಿದ್ದರು.


ಈ ಮನವಿಗೆ ಸ್ಪಂದಿಸಿದ ಸಚಿವರ ಸೂಚನೆಯಂತೆ ಬೆಂಗಳೂರಿನ ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿಯವರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಸದ್ರಿ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ಸಂಬಂಧಪಟ್ಟವರಿಗೆ ಸೂಕ್ತ ಮಾಹಿತಿ ಹಿಂಬರಹ ನೀಡುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಯವರು ಬೆಳ್ತಂಗಡಿ ತಹಶೀಲ್ದಾರರು ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಗೆ ಆದೇಶ ನೀಡಿ, ಈ ವಿಚಾರದ ಬಗ್ಗೆ ತುರ್ತಾಗಿ ಪರಿಶೀಲಿಸಿ ನಿಯಾಮನುಸಾರ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!