September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ಮತ್ತು ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ ಹುಟ್ಟು ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ, ಕಲ್ಲೇರಿ ಮೆಸ್ಕಾಂ ನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಮಂಗಳೂರಿಗೆ ಪದೋನ್ನತಿ ಪಡೆದಿರುವ ಸಂದೀಪ್ ಎಂ ಇವರಿಗೆ ಸನ್ಮಾನ, ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಆ 26 ರಂದು ನೆರವೇರಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡರ ದಿವ್ಯಹಸ್ತದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾಧಿಗಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಯುವಕ ಮಂಡಲ ಪದಾಧಿಕಾರಿಗಳು, ಸರ್ವ ಸದಸ್ಯರು, ಶ್ರೀ ಕ್ಷೇತ್ರದ ಮನೆಯವರು ಸಹಕರಿಸಿದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya
error: Content is protected !!