September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್ ಶೆಟ್ಟಿ ಅವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಚರಣ್ ಕುಮಾರ್ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಾರಿಜಾ ,ಶಾಲಾ ಮುಖ್ಯಶಿಕ್ಷಕರಾದ ಶ್ರೀ ಸೂರ್ಯನಾರಾಯಣ ಪುತ್ತೂರಾಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸಿ.ಆರ್‌.ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ಶಿಕ್ಷಕಿ ಚಿತ್ರ ರವರು ವಂದನಾರ್ಪಣೆ ಮಾಡಿದ ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶುಭರವರು ನಿರೂಪಿಸಿದರು. ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು, ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!