ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ , ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವಾನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ಇಂದು ಆಗಸ್ಟ್ 28 ಬುಧವಾರ ಸಂಜೆ 4.30 ಕ್ಕೆ ರಸ್ತೆ ತಡೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಯಲಿದೆ.

ಶಾಸಕರು , ವಿಧಾನ ಪರಿಷತ್ ಸದಸ್ಯರು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

error: Content is protected !!