25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

ಗುರುವಾಯನಕೆರೆ: ಕುವೆಟ್ಟು ಗ್ರಾಮ‌ ಪಂಚಾಯತ್ ನ 2024-25 ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಉನ್ನತ ಮಟ್ಟದ ಇಲಾಖಾಧಿಕಾಧಿಕಾರಿಗಳ ಗೈರಿನಿಂದಾಗಿ ರದ್ದುಗೊಂಡಿತು.

ಗ್ರಾಮಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಗೈರಾಗಿದ್ದಾರೆ. ಕೆಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಆದರೆ ಅಧಿಕಾರಿಗಳು ಭಾರದೆ ನಮ್ಮ ಸಮಸ್ಯೆ ಯಾರಲ್ಲಿ ಹೇಳವುದು. ಕಾಟಾಚಾರಕ್ಕೆ ಗ್ರಾಮಸಭೆ ಮಾಡುವುದು ಬೇಡಾ. ಸಾಮಾನ್ಯ ಸಭೆಯಲ್ಲಿ ಚರ್ಚೆಯಾದ ವಿಷಯವನ್ನು ಮೇಲಾಧಿಕಾರಿಗಳಿಗೆ ಪತ್ರ ಮೂಲಕ ತಿಳಿಸಿದರೂ ಅವರು ಬರುವುದಿಲ್ಲ ಎಂದರೆ ನಾವು ಗ್ರಾಮ ಸಭೆಯನ್ನು ಬಹಿಷ್ಕಾರ ಮಾಡುತ್ತೇವೆ. ಏಳೆಂಟು ತಿಂಗಳು ಕಳೆದ ನಂತರ ಗ್ರಾಮಸಭೆ ಆದರೂ ಅಧಿಕಾರಿಗಳು ಯಾಕೆ ಬರುವುದಿಲ್ಲ. ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಬರಲಿ. ಬೆಳೆಯುತ್ತಿರುವ ಗುರುವಾಯನಕೆರೆಗೆ ಪ್ರದೇಶದ ಕುವೆಟ್ಟು ಪಂಚಾಯತ್ ಗೆ ಯಾಕೆ ಅಧಿಕಾರಿಗಳು ಬರುವುದಿಲ್ಲ.ಇತ್ತಿಚೆಗೆ ಸುರಿದ ಭಾರಿ ಮಳೆಯಿಂದ ರಸ್ತೆಗಳು ಗುಂಡಿಗಳಾಗಿ ಮಾರ್ಪಟ್ಟಿದೆ. ಪಿಡ್ಲ್ಯೂಡಿ ಇಲಾಖೆಯವರು ಯಾರು ಬರಲಿಲ್ಲ. ಶಿಕ್ಷಣ ಇಲಾಖೆಯ ಡಿಡಿಪಿಐ ಯಲ್ಲಿ ಹಲವು ಸಮಸ್ಯೆಯ ಬಗ್ಗೆ ವಿಚಾರವನ್ನು ಮಾತಾಡೋಕೆ ಇದೆ. ಹೈವೆ ಅಧಿಕಾರಿಗಳು ಎಲ್ಲಿ. ಅವರಿಂದ ಸಮಸ್ಯೆಗಳಾಗಿದೆ, ನಾವು ಯಾರಲ್ಲಿ ಮಾತಾಡಬೇಕು, ಅವರು ಬರಬೇಕು ಎಂದು ಗ್ರಾಮಸ್ಥರು ಪಂಚಾಯತ ನ್ನು ಪ್ರಶ್ನಿಸಿದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು,ಮೆಸ್ಕಾಂ, ಕಂದಾಯ,ಪಿಡ್ಲೂಡಿ,ಪೋಲೀಸ್,ಶಿಕ್ಷಣ ಇಲಾಖೆ ಅಧಿಕಾರಿಗಳು ಬರಬೇಕು.ಇಲ್ಲದಿದ್ದರೆ ಗ್ರಾಮಸಭೆ ಬೇಡವೆಂದು ಗ್ರಾಮಸ್ಥರು ಪಟ್ಟು ಹಿಡಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಗ್ರಾಮಸಭೆಯನ್ನು ರದ್ದುಗೊಳಿಸಿ, ಸೆಪ್ಟೆಂಬರ್ 18 ಕ್ಕೆ ಗ್ರಾಮಸಭೆಗೆ ಮಾಡುವುದೆಂದು ಹೇಳಿದರು.

ಈ ಸಂದರ್ಭದಲ್ಲಿ ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ವಲಯ ಅರಣ್ಯಧಿಕಾರಿ ಅಶೋಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್, ಉಪಾಧ್ಯಕ್ಷ ಗಣೇಶ್ ಕೆ, ಸದಸ್ಯರಾದ ಆನಂದಿ,ವೇದಾವತಿ,ಲಕ್ಷ್ಮೀಶ,ವನಿತಾ ಜಿ,ವಿಜಯಲಕ್ಷ್ಮಿ, ಸದಾನಂದ ಮೂಲ್ಯ, ನಿತೇಶ್, ಮಹಮ್ಮದ್ ಮುಸ್ತಾಫ, ಶಮೀಮುಲ್ಲಾ ಕೆ, ಮೈಮುನ್ನಿಸಾ, ನಿತಿನ್ ಕುಮಾರ್, ಪ್ರದೀಪ್ ಶೆಟ್ಟಿ, ಆಶಾಲತಾ, ಕೆ.ಮಂಜುನಾಥ, ರಚನಾ, ಹೇಮಂತ, ಉಷಾ, ಶಾಲಿನಿ, ಸುಮಂಗಲಾ, ಸಿಲ್ವೆಸ್ಟಾರ್ ಫೆಲಿಕ್ಸ್ ಮೋನಿಸ್, ಎಮ್ ರಿಯಾಜ್, ಅಮೀನಾ ಹಾಗೂ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ,ಆಶಾ ಕಾರ್ಯಕರ್ತರು,ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!