23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ಮತ್ತು ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ ಹುಟ್ಟು ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ, ಕಲ್ಲೇರಿ ಮೆಸ್ಕಾಂ ನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಮಂಗಳೂರಿಗೆ ಪದೋನ್ನತಿ ಪಡೆದಿರುವ ಸಂದೀಪ್ ಎಂ ಇವರಿಗೆ ಸನ್ಮಾನ, ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಆ 26 ರಂದು ನೆರವೇರಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡರ ದಿವ್ಯಹಸ್ತದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾಧಿಗಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಯುವಕ ಮಂಡಲ ಪದಾಧಿಕಾರಿಗಳು, ಸರ್ವ ಸದಸ್ಯರು, ಶ್ರೀ ಕ್ಷೇತ್ರದ ಮನೆಯವರು ಸಹಕರಿಸಿದರು.

Related posts

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
error: Content is protected !!