23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ಮತ್ತು ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ ಹುಟ್ಟು ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ, ಕಲ್ಲೇರಿ ಮೆಸ್ಕಾಂ ನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಮಂಗಳೂರಿಗೆ ಪದೋನ್ನತಿ ಪಡೆದಿರುವ ಸಂದೀಪ್ ಎಂ ಇವರಿಗೆ ಸನ್ಮಾನ, ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಆ 26 ರಂದು ನೆರವೇರಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡರ ದಿವ್ಯಹಸ್ತದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾಧಿಗಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಯುವಕ ಮಂಡಲ ಪದಾಧಿಕಾರಿಗಳು, ಸರ್ವ ಸದಸ್ಯರು, ಶ್ರೀ ಕ್ಷೇತ್ರದ ಮನೆಯವರು ಸಹಕರಿಸಿದರು.

Related posts

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya
error: Content is protected !!