April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್ ಶೆಟ್ಟಿ ಅವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಚರಣ್ ಕುಮಾರ್ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಾರಿಜಾ ,ಶಾಲಾ ಮುಖ್ಯಶಿಕ್ಷಕರಾದ ಶ್ರೀ ಸೂರ್ಯನಾರಾಯಣ ಪುತ್ತೂರಾಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸಿ.ಆರ್‌.ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ಶಿಕ್ಷಕಿ ಚಿತ್ರ ರವರು ವಂದನಾರ್ಪಣೆ ಮಾಡಿದ ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶುಭರವರು ನಿರೂಪಿಸಿದರು. ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು, ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Related posts

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya
error: Content is protected !!