22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಸದಸ್ಯ ಶರತ್ ಕುಮಾರ್ ಶೆಟ್ಟಿ ಅವರು ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಚರಣ್ ಕುಮಾರ್ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಾರಿಜಾ ,ಶಾಲಾ ಮುಖ್ಯಶಿಕ್ಷಕರಾದ ಶ್ರೀ ಸೂರ್ಯನಾರಾಯಣ ಪುತ್ತೂರಾಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರು ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸಿ.ಆರ್‌.ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ಶಿಕ್ಷಕಿ ಚಿತ್ರ ರವರು ವಂದನಾರ್ಪಣೆ ಮಾಡಿದ ಈ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶುಭರವರು ನಿರೂಪಿಸಿದರು. ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು, ಪೋಷಕರು, ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya
error: Content is protected !!