25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

ಕೊಯ್ಯೂರು : ಇಲ್ಲಿಯ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಸದಸ್ಯರಾಗಿ ನಂತರ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಭಜನಾ ಮಂಡಳಿಯ ಗೌರವ ಸಲಹೆಗಾರರಾಗಿ ಊರಿನ ವಿವಿಧ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಲಾಯಿಲ ವಲಯದ ಭಜನಾ ಪರಿಷತ್ತಿನ ಸಂಯೋಜಕರಾಗಿ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾಗಿ ತಾಲೂಕು ಕುಣಿತ ಭಜನೆಯ ತರಬೇತಿದಾರರುಗಳ ಸಂಘ ಸ್ಥಾಪನೆಯ ಕಾರಣಿಕರ್ತರಾಗಿ ಅದರ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಪಿ ಚಂದ್ರಶೇಖರ ಸಾಲ್ಯಾನ್ ಇವರಿಗೆ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇದರ ವತಿಯಿಂದ ಅಭಿನಂದನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಕ್ಷ ಉಮಿಯ ದರ್ಕಾಸು, ಕಾರ್ಯದರ್ಶಿ ಓಬಯ್ಯ ನಾಯ್ಕ, ಗೌರವಾಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ, ಊರಿನ ಪ್ರಗತಿಪರ ಕೃಷಿಕರು ಹಿರಿಯರು ಭಜನಾ ಮಂಡಳಿಯ ಗೌರವ ಸಲಹೆಗಾರರಾದ ಪ್ರಚಂಡಬಾನು ಭಟ್ ಪಾಂಬೆಲು, ಸಲಹೆಗಾರರುಗಳಾದ ಶೇಖರ ಗೌಡ ಕೋರಿಯಾರು, ಕುಶಾಲಪ್ಪ ನಾಯ್ಕ ಕುಕ್ಕುದಡಿ, ಉಪಾಧ್ಯಕ್ಷರುಗಳಾದ ಸುಂದರ ಗೌಡ ಕಜೆಕೋಡಿ, ರಮೇಶ್ ಗೌಡ ಮಾವಿನಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಅಶೋಕ ಪೂಜಾರಿ ಕುಂಇಿಮೇರು, ಜಿತೇಶ್ ಪೂಜಾರಿ ಸಾಂತ್ಯೋಡಿ, ಲೆಕ್ಕ ಪರಿಶೋಧಕರುಗಳಾದ ಲಿಂಗಪ್ಪ ಗೌಡ ಬೆರ್ಕೆ, ಹೇಮಂತಗೌಡ ದೆಂತ್ಯಾರು ಬೊಟ್ಟು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ದೇಜಪ್ಪಗೌಡ ಬೆಲ್ದೆ, ಮಹಿಳಾ ಭಜನಾ ತಂಡದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಹೇಮಂತ ಗೌಡ ಜಂಕಿನಡ್ಕ, ಗೌರವಾಧ್ಯಕ್ಷೆಯಾದ ಶ್ರೀಮತಿ ಮಾಲಿನಿ ಧನಂಜಯ ಆಚಾರ್ಯ ಕೋಡಿಯಲು, ಜೊತೆ ಕಾರ್ಯದರ್ಶಿಯಾದ ಶ್ರೀಮತಿ ಹರಿನಾಕ್ಷಿ ಆದೂರು ಪೆರಾಲ್, ಸಂಘಟನಾ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಕಾಂತಪ್ಪ ಗೌಡ ಬರೆಮೇಲು, ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ವಿನಯ್ ಕೆ, ಉಪಾಧ್ಯಕ್ಷ ಯಶವಂತ ಗೌಡ ಪುರ್ಯಳ, ಕಾರ್ಯದರ್ಶಿ ಮನೋಜ್ ಕಜೆ, ಜೊತೆ ಕಾರ್ಯದರ್ಶಿ ದಿನೇಶ್ ಜಾನ್ಲಾಪು, ಕೋಶಾಧಿಕಾರಿ ಗೀತಾ ರಾಮಣ್ಣಗೌಡ ಕೋಡಿಯೆಲು, ಕ್ರೀಡಾ ಸಮಿತಿಯ ಸಂಚಾಲಕರಾದ ದಾಮೋದರ ಗೌಡ ಬೆರ್ಕೆ ಹರ್ಷ ಗೆಳೆಯರ ಬಳಗದ ಅಧ್ಯಕ್ಷ ರಾಮಣ್ಣ ಗೌಡ ಕುಂಞಮೇರು, ಕಾರ್ಯದರ್ಶಿಯಾದ ಭರತ್ ದೆಂಬುಗ ಮತ್ತು ಭಜನಾ ಮಂಡಳಿಗಳ ಎಲ್ಲಾ ಸದಸ್ಯರುಗಳು ಹಾಗೂ ಊರವರು ಪಾಲ್ಗೊಂಡಿದ್ದರು.

Related posts

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya
error: Content is protected !!