25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಅರಸಿನಮಕ್ಕಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮವನ್ನು ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ಘಟಕ ಮತ್ತು ಪ್ರೌಢ ಶಾಲಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಅಂದಿನ ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಶಿಬಾಜೆ ಗ್ರಾಮದ ಪ್ರಸನ್ನ ಬರ್ಗುಳ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಮಕ್ಕಳೊಂದಿಗೆ ಸಂವಾದ ನಡೆಸಿ ಸೈನಿಕನಾಗ ಬಯಸುವ ಯುವ ಶಕ್ತಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಹಾಗೆಯೇ ತಾನು ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಪರಿಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಗಿಲ್ ವನ ನಿರ್ಮಿಸಿ ಮೆಚ್ಚುಗೆ ಗಳಿಸಿದ್ದ ಸಚಿನ್ ಭಿಡೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಚಂದ್ರು, ಶಿಬಾಜೆ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್ ಕುರುಪ್, ರತ್ನಮ್ಮ, ವಲಯ ಮೇಲ್ವಿಚಾರಕಿ ಶಶಿಕಲಾ, ಶೌರ್ಯ ವಿಪತ್ತು ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರು ಸ್ವಾಗತಿಸಿ, ಪರಿಚಯ ಮತ್ತು ಪ್ರಾಸ್ಥವಿಕ ನುಡಿಯನ್ನು ಅವಿನಾಶ್ ಭಿಡೆ ನೆರವೇರಿಸಿದರು. ಮಂಜುಳ ನಿರೂಪಿಸಿ, ಚೇತನಾಕ್ಷಿ ಧನ್ಯವಾದಗೈದರು.

Related posts

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya
error: Content is protected !!