September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಅರಸಿನಮಕ್ಕಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮವನ್ನು ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ಘಟಕ ಮತ್ತು ಪ್ರೌಢ ಶಾಲಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಅಂದಿನ ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಶಿಬಾಜೆ ಗ್ರಾಮದ ಪ್ರಸನ್ನ ಬರ್ಗುಳ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಮಕ್ಕಳೊಂದಿಗೆ ಸಂವಾದ ನಡೆಸಿ ಸೈನಿಕನಾಗ ಬಯಸುವ ಯುವ ಶಕ್ತಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಹಾಗೆಯೇ ತಾನು ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಪರಿಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಗಿಲ್ ವನ ನಿರ್ಮಿಸಿ ಮೆಚ್ಚುಗೆ ಗಳಿಸಿದ್ದ ಸಚಿನ್ ಭಿಡೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಚಂದ್ರು, ಶಿಬಾಜೆ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್ ಕುರುಪ್, ರತ್ನಮ್ಮ, ವಲಯ ಮೇಲ್ವಿಚಾರಕಿ ಶಶಿಕಲಾ, ಶೌರ್ಯ ವಿಪತ್ತು ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರು ಸ್ವಾಗತಿಸಿ, ಪರಿಚಯ ಮತ್ತು ಪ್ರಾಸ್ಥವಿಕ ನುಡಿಯನ್ನು ಅವಿನಾಶ್ ಭಿಡೆ ನೆರವೇರಿಸಿದರು. ಮಂಜುಳ ನಿರೂಪಿಸಿ, ಚೇತನಾಕ್ಷಿ ಧನ್ಯವಾದಗೈದರು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!