September 6, 2026
ಪ್ರಮುಖ ಸುದ್ದಿ

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

ಬೆಳ್ತಂಗಡಿ : ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿಯಾಗಿದ್ದು, ಇದನ್ನು ಕಂಡ ಎಸ್. ಡಿ. ಟಿ. ಯು ಆಟೋ ಯೂನಿಯನ್ ಹಳೆಪೇಟೆ ಇದರ ಅಧ್ಯಕ್ಷರಾದ ಶರೀಫ್ ಎಸ್. ಎಂ ತನ್ನ ಬಾಡಿಗೆದಾರರನ್ನು ಬಿಟ್ಟು ಅಪಘಾತಕ್ಕೆ ಒಳಗಾದವರನ್ನು ತನ್ನದೇ ರಿಕ್ಷಾದಲ್ಲಿ ಸಾಗಿಸಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತಕ್ಕೆ ಒಳಗಾದವರು ಯು. ಪ್ಲಸ್ ಚಾನೆಲ್ ನ ಸಿಬ್ಬಂದಿಗಳಾಗಿರುತ್ತಾರೆ.
ಟ್ಯಾಂಕರ್ ಲಾರಿಯನ್ನು ಚರ್ಚ್ ರಸ್ತೆಯ ಬಳಿ ತನ್ನ ರಿಕ್ಷಾದಲ್ಲಿ ಹಿಂಬಾಲಿಸಿ ತಡೆದು ನಿಲ್ಲಿಸಿ, ಬೆಳ್ತಂಗಡಿ ಠಾಣೆಗೆ ದೂರು ನೀಡಿದರು. ಆ ಕೂಡಲೇ ಠಾಣೆಯ ಪೊಲೀಸರು ತಕ್ಷಣ ಸ್ಪಂದಿಸಿ ಟ್ಯಾಂಕರ್ ಹಾಗೂ ಟ್ಯಾಂಕರ್ ಚಾಲಕನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya
error: Content is protected !!