September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್ ಎಂಬಾತ ನಿಂತುಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ. ಆ ಸಮಯ ಎದುರಿನಿಂದ ಬೇರೆ ವಾಹನ ಬಂದುದರಿಂದ ಸಿದ್ದೀಕ್ ಅವರು ತಮ್ಮ ವಾಹನವನ್ನು ಆರೋಪಿಯ ಸಮೀಪದಿಂದ ಚಲಾಯಿಸಿದ್ದಾರೆ. ಈ ವೇಳೆ ಶರತ್ ಅವಾಚ್ಯವಾಗಿ ಬೈದಿದ್ದಾನೆ. ನಂತರ ಸಿದ್ದೀಕ್ ಅವರು ವಾಹನ ಚಲಾಯಿಸುತ್ತಾ ಮುಂದೆ ಹೋದಾಗ ಅವರ ಹಿಂದಿನಿಂದ ಶರತ್ ಮೋಟಾರು ಬೈಕಿನಲ್ಲಿ ಹಿಂಬಾಲಿಸಿ ಬಂದು ಸಿದ್ದೀಕ್ ಅವರನ್ನು ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾನೆ.

ಗಾಯಗೊಂಡ ಸಿದ್ದೀಕ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 100/2024003 0 126(2), 115(2), 352,351(2) BNS 2023 ರಡಿ ಪ್ರಕರಣ ದಾಖಲಾಗಿದೆ.

Related posts

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!