25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಅರಸಿನಮಕ್ಕಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮವನ್ನು ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ಘಟಕ ಮತ್ತು ಪ್ರೌಢ ಶಾಲಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಅಂದಿನ ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಶಿಬಾಜೆ ಗ್ರಾಮದ ಪ್ರಸನ್ನ ಬರ್ಗುಳ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಮಕ್ಕಳೊಂದಿಗೆ ಸಂವಾದ ನಡೆಸಿ ಸೈನಿಕನಾಗ ಬಯಸುವ ಯುವ ಶಕ್ತಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಹಾಗೆಯೇ ತಾನು ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಪರಿಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಗಿಲ್ ವನ ನಿರ್ಮಿಸಿ ಮೆಚ್ಚುಗೆ ಗಳಿಸಿದ್ದ ಸಚಿನ್ ಭಿಡೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಚಂದ್ರು, ಶಿಬಾಜೆ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್ ಕುರುಪ್, ರತ್ನಮ್ಮ, ವಲಯ ಮೇಲ್ವಿಚಾರಕಿ ಶಶಿಕಲಾ, ಶೌರ್ಯ ವಿಪತ್ತು ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರು ಸ್ವಾಗತಿಸಿ, ಪರಿಚಯ ಮತ್ತು ಪ್ರಾಸ್ಥವಿಕ ನುಡಿಯನ್ನು ಅವಿನಾಶ್ ಭಿಡೆ ನೆರವೇರಿಸಿದರು. ಮಂಜುಳ ನಿರೂಪಿಸಿ, ಚೇತನಾಕ್ಷಿ ಧನ್ಯವಾದಗೈದರು.

Related posts

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!