April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

ಉಜಿರೆ : ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೂ ಕೂಡ ಬಲಿಯಾಗದೆ ತಮ್ಮನ್ನು ತಾವು ನಿಯಂತ್ರಣದಲ್ಲಿ ಇಟ್ಟುಕೊಂಡು ಒಳ್ಳೆಯವರ ಸ್ನೇಹವನ್ನು ಬೆಳೆಸಿ ಉತ್ತಮ ಜೀವನವನ್ನು ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ಸ್ ಹೇಳಿದರು.

ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಮಾರು 30 ವರ್ಷಗಳ ತನ್ನ ಸುದೀರ್ಘ ಅನುಭವದಲ್ಲಿ ಅನೇಕ ಮದ್ಯವ್ಯಸನಿಗಳನ್ನು ತಾನು ನೋಡಿದ್ದು ಈ ಚಟಗಳಿಂದ ಅನೇಕರು ಕುಟುಂಬವನ್ನು ಕಳೆದುಕೊಂಡಿದ್ದಾರೆ ಹಾಗೆ ಯಾವುದೇ ಮಹಾ ಗ್ರಂಥಗಳಲ್ಲಿ ಮದ್ಯಪಾನ ಮಾಡಿ ಎನ್ನುವಂತ ಉಲ್ಲೇಖ ಇಲ್ಲ ಎಂದರು.

ವಿದ್ಯಾರ್ಥಿಗಳು ಯಾವುದೇ ಆಮಿಷಕ್ಕೆ ತಮ್ಮನ್ನು ತಾವು ಒಳಪಡಿಸದೆ ಕಾಲೇಜಿನ ಎಲ್ಲಾ ಚಟುವಟಿಕೆಯನ್ನು ಮನಪೂರ್ವಕವಾಗಿ ಮಾಡಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹೇಳಿದರು.
ಎಲ್ಲಾ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರ ರೆಡ್ ಕ್ರಾಸ್ ಸಂಯೋಜಕ ಪ್ರಶಾಂತ್ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕರಾದ ಪಾರ್ಶ್ವನಾಥ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!