25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

ಬೆಳ್ತಂಗಡಿ : ಜೇಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಒಂದು ವಾರಗಳ ಕಾಲ ನಡೆಯುವ ತರಬೇತಿ ಸಪ್ತಾಹ ‘ಶ್ರಾವಣ ‘ ಇದರ ಉದ್ಘಾಟನಾ ಸಮಾರಂಭವನ್ನು ಆ. 25 ರಂದು ಬೆಳ್ತಂಗಡಿಯ ಬಿ ಸಿ ಎಂ ಹಾಸ್ಟೆಲ್‌ನಲ್ಲಿ ಆಯೋಜಿಸಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ತರಬೇತಿ ಸಪ್ತಾಹವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿರಂತರ ಕಲಿಕೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರು. ಜೆಸಿಐ ಬೆಳ್ತಂಗಡಿಯು ವ್ಯಕ್ತಿತ್ವ ವಿಕಸನವನ್ನು ರೂಪಿಸುವ ತರಬೇತಿ ಕಾರ್ಯಕ್ರಮ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ರಂಜಿತ್ ಹೆಚ್ ಡಿ ವಹಿಸಿದ್ದರು . ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಲು ಮತ್ತು ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಸರಣಿ ತರಬೇತಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ನಂತರ ವಲಯ ತರಬೇತುದಾರರಾದ ರಂಜಿತ್ ಎಚ್ ಡಿ ಬಳಂಜ ಇವರು ಎರಡು ತಾಸು ಸಭಾ ನಿರ್ವಹಣೆಯ ಬಗ್ಗೆ 50 ಮಂದಿ ಮಕ್ಕಳಿಗೆ ತರಬೇತಿಯನ್ನು ನೀಡಿದರು.

ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರರಾದ ನಾರಾಯಣ ಶೆಟ್ಟಿ ಮಾಡಿದರು. ಕಾರ್ಯಕ್ರಮದಲ್ಲಿ ಪೂರ್ವ ಅಧ್ಯಕ್ಷರಾದ ಸುಭಾಶ್ಚಂದ್ರ ಎಂ.ಪಿ., ಜೆಜೆಸಿ ಅಧ್ಯಕ್ಷ ಜೆಜೆಸಿ ಸಮನ್ವೀತ್ ಕುಮಾರ್, ಇದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
error: Content is protected !!