23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

ಬೆಳ್ತಂಗಡಿ : ಜೇಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಒಂದು ವಾರಗಳ ಕಾಲ ನಡೆಯುವ ತರಬೇತಿ ಸಪ್ತಾಹ ‘ಶ್ರಾವಣ ‘ ಇದರ ಉದ್ಘಾಟನಾ ಸಮಾರಂಭವನ್ನು ಆ. 25 ರಂದು ಬೆಳ್ತಂಗಡಿಯ ಬಿ ಸಿ ಎಂ ಹಾಸ್ಟೆಲ್‌ನಲ್ಲಿ ಆಯೋಜಿಸಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ತರಬೇತಿ ಸಪ್ತಾಹವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿರಂತರ ಕಲಿಕೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರು. ಜೆಸಿಐ ಬೆಳ್ತಂಗಡಿಯು ವ್ಯಕ್ತಿತ್ವ ವಿಕಸನವನ್ನು ರೂಪಿಸುವ ತರಬೇತಿ ಕಾರ್ಯಕ್ರಮ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ರಂಜಿತ್ ಹೆಚ್ ಡಿ ವಹಿಸಿದ್ದರು . ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಲು ಮತ್ತು ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಸರಣಿ ತರಬೇತಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ನಂತರ ವಲಯ ತರಬೇತುದಾರರಾದ ರಂಜಿತ್ ಎಚ್ ಡಿ ಬಳಂಜ ಇವರು ಎರಡು ತಾಸು ಸಭಾ ನಿರ್ವಹಣೆಯ ಬಗ್ಗೆ 50 ಮಂದಿ ಮಕ್ಕಳಿಗೆ ತರಬೇತಿಯನ್ನು ನೀಡಿದರು.

ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರರಾದ ನಾರಾಯಣ ಶೆಟ್ಟಿ ಮಾಡಿದರು. ಕಾರ್ಯಕ್ರಮದಲ್ಲಿ ಪೂರ್ವ ಅಧ್ಯಕ್ಷರಾದ ಸುಭಾಶ್ಚಂದ್ರ ಎಂ.ಪಿ., ಜೆಜೆಸಿ ಅಧ್ಯಕ್ಷ ಜೆಜೆಸಿ ಸಮನ್ವೀತ್ ಕುಮಾರ್, ಇದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!