30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

ಬಳಂಜ :ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರ ನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲ ಗೋಕುಲ ಸ್ಥಾನಿಯ ಸಮಿತಿ ವತಿಯಿಂದ ನಡೆದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಡೆದ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿದರು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.

ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಕೇರಳದಲ್ಲಿ ನಡೆದ ಕುಣಿತ ಭಜನಾ ಕಾರ್ಯಕ್ರಮವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅಲ್ಲಿನ ಸಮಿತಿಯವರು ಮಂಡಳಿಯ ಸಂಚಾಲಕರಾದ ಹರೀಶ್ ವೈ.ಚಂದ್ರಮ,ಅಧ್ಯಕ್ಷರಾದ ಜ್ಯೋತಿ, ಹಾಗೂ ತರಬೇತುದಾರರಾದ ಕು.ಮಾನ್ಯ ರವರನ್ನು ಸನ್ಮಾನಿಸಿದರು.ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!