37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

ಬಳಂಜ :ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರ ನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲ ಗೋಕುಲ ಸ್ಥಾನಿಯ ಸಮಿತಿ ವತಿಯಿಂದ ನಡೆದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಡೆದ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿದರು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.

ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಕೇರಳದಲ್ಲಿ ನಡೆದ ಕುಣಿತ ಭಜನಾ ಕಾರ್ಯಕ್ರಮವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅಲ್ಲಿನ ಸಮಿತಿಯವರು ಮಂಡಳಿಯ ಸಂಚಾಲಕರಾದ ಹರೀಶ್ ವೈ.ಚಂದ್ರಮ,ಅಧ್ಯಕ್ಷರಾದ ಜ್ಯೋತಿ, ಹಾಗೂ ತರಬೇತುದಾರರಾದ ಕು.ಮಾನ್ಯ ರವರನ್ನು ಸನ್ಮಾನಿಸಿದರು.ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!