25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

ಬಳಂಜ :ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರ ನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲ ಗೋಕುಲ ಸ್ಥಾನಿಯ ಸಮಿತಿ ವತಿಯಿಂದ ನಡೆದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಡೆದ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿದರು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.

ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಕೇರಳದಲ್ಲಿ ನಡೆದ ಕುಣಿತ ಭಜನಾ ಕಾರ್ಯಕ್ರಮವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅಲ್ಲಿನ ಸಮಿತಿಯವರು ಮಂಡಳಿಯ ಸಂಚಾಲಕರಾದ ಹರೀಶ್ ವೈ.ಚಂದ್ರಮ,ಅಧ್ಯಕ್ಷರಾದ ಜ್ಯೋತಿ, ಹಾಗೂ ತರಬೇತುದಾರರಾದ ಕು.ಮಾನ್ಯ ರವರನ್ನು ಸನ್ಮಾನಿಸಿದರು.ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya
error: Content is protected !!