25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

ಬಳಂಜ :ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರ ನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲ ಗೋಕುಲ ಸ್ಥಾನಿಯ ಸಮಿತಿ ವತಿಯಿಂದ ನಡೆದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಡೆದ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿದರು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.

ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಕೇರಳದಲ್ಲಿ ನಡೆದ ಕುಣಿತ ಭಜನಾ ಕಾರ್ಯಕ್ರಮವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅಲ್ಲಿನ ಸಮಿತಿಯವರು ಮಂಡಳಿಯ ಸಂಚಾಲಕರಾದ ಹರೀಶ್ ವೈ.ಚಂದ್ರಮ,ಅಧ್ಯಕ್ಷರಾದ ಜ್ಯೋತಿ, ಹಾಗೂ ತರಬೇತುದಾರರಾದ ಕು.ಮಾನ್ಯ ರವರನ್ನು ಸನ್ಮಾನಿಸಿದರು.ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!