22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಆ.29 ರಂದು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್, ಕಾರ್ಯದರ್ಶಿ ದಿನೇಶ್, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಶಾಲಾ ಮುಖ್ಯೋಪಾಧ್ಯಾಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ. ಸ್ವಾಗತಿಸಿ, ಲೆಕ್ಕ ಸಹಾಯಕಿ ಪ್ರಮೀಳಾ ಜಮಾ ಖರ್ಚು ವಿವರಿಸಿದರು. ಗ್ರಾ.ಪಂ. ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ವರದಿ ವಾಚಿಸಿದರು.

Related posts

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
error: Content is protected !!