April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್ ಎಂಬಾತ ನಿಂತುಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ. ಆ ಸಮಯ ಎದುರಿನಿಂದ ಬೇರೆ ವಾಹನ ಬಂದುದರಿಂದ ಸಿದ್ದೀಕ್ ಅವರು ತಮ್ಮ ವಾಹನವನ್ನು ಆರೋಪಿಯ ಸಮೀಪದಿಂದ ಚಲಾಯಿಸಿದ್ದಾರೆ. ಈ ವೇಳೆ ಶರತ್ ಅವಾಚ್ಯವಾಗಿ ಬೈದಿದ್ದಾನೆ. ನಂತರ ಸಿದ್ದೀಕ್ ಅವರು ವಾಹನ ಚಲಾಯಿಸುತ್ತಾ ಮುಂದೆ ಹೋದಾಗ ಅವರ ಹಿಂದಿನಿಂದ ಶರತ್ ಮೋಟಾರು ಬೈಕಿನಲ್ಲಿ ಹಿಂಬಾಲಿಸಿ ಬಂದು ಸಿದ್ದೀಕ್ ಅವರನ್ನು ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾನೆ.

ಗಾಯಗೊಂಡ ಸಿದ್ದೀಕ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 100/2024003 0 126(2), 115(2), 352,351(2) BNS 2023 ರಡಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya
error: Content is protected !!