September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್ ಎಂಬಾತ ನಿಂತುಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ. ಆ ಸಮಯ ಎದುರಿನಿಂದ ಬೇರೆ ವಾಹನ ಬಂದುದರಿಂದ ಸಿದ್ದೀಕ್ ಅವರು ತಮ್ಮ ವಾಹನವನ್ನು ಆರೋಪಿಯ ಸಮೀಪದಿಂದ ಚಲಾಯಿಸಿದ್ದಾರೆ. ಈ ವೇಳೆ ಶರತ್ ಅವಾಚ್ಯವಾಗಿ ಬೈದಿದ್ದಾನೆ. ನಂತರ ಸಿದ್ದೀಕ್ ಅವರು ವಾಹನ ಚಲಾಯಿಸುತ್ತಾ ಮುಂದೆ ಹೋದಾಗ ಅವರ ಹಿಂದಿನಿಂದ ಶರತ್ ಮೋಟಾರು ಬೈಕಿನಲ್ಲಿ ಹಿಂಬಾಲಿಸಿ ಬಂದು ಸಿದ್ದೀಕ್ ಅವರನ್ನು ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾನೆ.

ಗಾಯಗೊಂಡ ಸಿದ್ದೀಕ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 100/2024003 0 126(2), 115(2), 352,351(2) BNS 2023 ರಡಿ ಪ್ರಕರಣ ದಾಖಲಾಗಿದೆ.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
error: Content is protected !!