April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಅರಸಿನಮಕ್ಕಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮವನ್ನು ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ಘಟಕ ಮತ್ತು ಪ್ರೌಢ ಶಾಲಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಅಂದಿನ ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಶಿಬಾಜೆ ಗ್ರಾಮದ ಪ್ರಸನ್ನ ಬರ್ಗುಳ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಮಕ್ಕಳೊಂದಿಗೆ ಸಂವಾದ ನಡೆಸಿ ಸೈನಿಕನಾಗ ಬಯಸುವ ಯುವ ಶಕ್ತಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಹಾಗೆಯೇ ತಾನು ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಪರಿಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಗಿಲ್ ವನ ನಿರ್ಮಿಸಿ ಮೆಚ್ಚುಗೆ ಗಳಿಸಿದ್ದ ಸಚಿನ್ ಭಿಡೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಚಂದ್ರು, ಶಿಬಾಜೆ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್ ಕುರುಪ್, ರತ್ನಮ್ಮ, ವಲಯ ಮೇಲ್ವಿಚಾರಕಿ ಶಶಿಕಲಾ, ಶೌರ್ಯ ವಿಪತ್ತು ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರು ಸ್ವಾಗತಿಸಿ, ಪರಿಚಯ ಮತ್ತು ಪ್ರಾಸ್ಥವಿಕ ನುಡಿಯನ್ನು ಅವಿನಾಶ್ ಭಿಡೆ ನೆರವೇರಿಸಿದರು. ಮಂಜುಳ ನಿರೂಪಿಸಿ, ಚೇತನಾಕ್ಷಿ ಧನ್ಯವಾದಗೈದರು.

Related posts

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!