24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಅರಸಿನಮಕ್ಕಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮವನ್ನು ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ಘಟಕ ಮತ್ತು ಪ್ರೌಢ ಶಾಲಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಅಂದಿನ ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಶಿಬಾಜೆ ಗ್ರಾಮದ ಪ್ರಸನ್ನ ಬರ್ಗುಳ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ಮಕ್ಕಳೊಂದಿಗೆ ಸಂವಾದ ನಡೆಸಿ ಸೈನಿಕನಾಗ ಬಯಸುವ ಯುವ ಶಕ್ತಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಹಾಗೆಯೇ ತಾನು ಕಾರ್ಗಿಲ್ ಹೋರಾಟದಲ್ಲಿ ತೊಡಗಿಸಿಕೊಂಡ ಪರಿಯನ್ನು ಮಕ್ಕಳಿಗೆ ತಿಳಿಸಿದರು. ಕಾರ್ಗಿಲ್ ವನ ನಿರ್ಮಿಸಿ ಮೆಚ್ಚುಗೆ ಗಳಿಸಿದ್ದ ಸಚಿನ್ ಭಿಡೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಚಂದ್ರು, ಶಿಬಾಜೆ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್ ಕುರುಪ್, ರತ್ನಮ್ಮ, ವಲಯ ಮೇಲ್ವಿಚಾರಕಿ ಶಶಿಕಲಾ, ಶೌರ್ಯ ವಿಪತ್ತು ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಚಂದ್ರು ಸ್ವಾಗತಿಸಿ, ಪರಿಚಯ ಮತ್ತು ಪ್ರಾಸ್ಥವಿಕ ನುಡಿಯನ್ನು ಅವಿನಾಶ್ ಭಿಡೆ ನೆರವೇರಿಸಿದರು. ಮಂಜುಳ ನಿರೂಪಿಸಿ, ಚೇತನಾಕ್ಷಿ ಧನ್ಯವಾದಗೈದರು.

Related posts

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!