37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು.

ಕುಡಿಯಲು ನೀರಿಲ್ಲದೆ ಮಳೆ ನೀರನ್ನು ಕುಡಿಯಬೇಕಾದ ಪರಿಸ್ಥಿತಿ ಎದುರಾಗಿದೆ. ಪಂಚಾಯತ್ ನ ಬೋರು ಕೆಟ್ಟು ಹೋದರು ಇನ್ನೂ ರಿಪೇರಿ ಮಾಡಿಲ್ಲ. ಆದ್ದರಿಂದ ನಮಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಅಬ್ದುಲ್ ನಜೀರ್ ತಿಳಿಸಿದರು.

ಈ ವೇಳೆ ಚಾರ್ಮಾಡಿ ಗ್ರಾಮ ಪಂಚಾಯತ್ ನವರು ತಕ್ಷಣ ಸ್ಪಂದಿಸಿ ಕೆಟ್ಟು ಹೋದ ಬೋರ್ ಗಳನ್ನು ತಕ್ಷಣ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿದರು.

Related posts

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
error: Content is protected !!