23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

ಬಳಂಜ :ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ದೇವರ ನಾಡು ಕೇರಳದ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ದುರ್ಗಾ ಬಾಲ ಗೋಕುಲ ಸ್ಥಾನಿಯ ಸಮಿತಿ ವತಿಯಿಂದ ನಡೆದ ಶ್ರೀ ಕೃಷ್ಣ ಜಯಂತಿ ಅಂಗವಾಗಿ ನಡೆದ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಿದರು.

ಸಮಾಜ ಸೇವಕರಾದ ಹರೀಶ್ ವೈ ಚಂದ್ರಮರವರ ಪ್ರಧಾನ ಸಂಚಾಲಕತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ 236ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು 8 ಜಿಲ್ಲೆ ಹಾಗೂ ಎರಡು ಹೊರ ರಾಜ್ಯದಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದೆ.

ಇದರ ಜೊತೆಗೆ ಹಲವು ಜನಪರ ಸೇವೆಯನ್ನು ಸಹ ಮಾಡುತ್ತಾ ಬರುತ್ತಿದ್ದಾರೆ. ಕೇರಳದಲ್ಲಿ ನಡೆದ ಕುಣಿತ ಭಜನಾ ಕಾರ್ಯಕ್ರಮವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಅಲ್ಲಿನ ಸಮಿತಿಯವರು ಮಂಡಳಿಯ ಸಂಚಾಲಕರಾದ ಹರೀಶ್ ವೈ.ಚಂದ್ರಮ,ಅಧ್ಯಕ್ಷರಾದ ಜ್ಯೋತಿ, ಹಾಗೂ ತರಬೇತುದಾರರಾದ ಕು.ಮಾನ್ಯ ರವರನ್ನು ಸನ್ಮಾನಿಸಿದರು.ಪೋಷಕರು ಮತ್ತು ಮಂಡಳಿಯ ಸದಸ್ಯರ ಪೂರ್ಣ ಸಹಕಾರದಿಂದ ಇಷ್ಟು ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಗಿದೆ ಎಂದು ಹರೀಶ್ ವೈ.ಚಂದ್ರಮ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಡಳಿಯ ಮುಖ್ಯ ತರಬೇತುದಾರರಾಗಿ ಕು.ಮಾನ್ಯ ಹಾಗೂ ಅಧ್ಯಕ್ಷರಾಗಿ ಕು.ಜ್ಯೋತಿ, ಉಪ ಸಂಚಾಲಕರಾಗಿ ಪ್ರಣಾಮ್ ಶೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya
error: Content is protected !!