25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್ ಎಂಬಾತ ನಿಂತುಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ. ಆ ಸಮಯ ಎದುರಿನಿಂದ ಬೇರೆ ವಾಹನ ಬಂದುದರಿಂದ ಸಿದ್ದೀಕ್ ಅವರು ತಮ್ಮ ವಾಹನವನ್ನು ಆರೋಪಿಯ ಸಮೀಪದಿಂದ ಚಲಾಯಿಸಿದ್ದಾರೆ. ಈ ವೇಳೆ ಶರತ್ ಅವಾಚ್ಯವಾಗಿ ಬೈದಿದ್ದಾನೆ. ನಂತರ ಸಿದ್ದೀಕ್ ಅವರು ವಾಹನ ಚಲಾಯಿಸುತ್ತಾ ಮುಂದೆ ಹೋದಾಗ ಅವರ ಹಿಂದಿನಿಂದ ಶರತ್ ಮೋಟಾರು ಬೈಕಿನಲ್ಲಿ ಹಿಂಬಾಲಿಸಿ ಬಂದು ಸಿದ್ದೀಕ್ ಅವರನ್ನು ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾನೆ.

ಗಾಯಗೊಂಡ ಸಿದ್ದೀಕ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 100/2024003 0 126(2), 115(2), 352,351(2) BNS 2023 ರಡಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!