23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್ ಎಂಬಾತ ನಿಂತುಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ. ಆ ಸಮಯ ಎದುರಿನಿಂದ ಬೇರೆ ವಾಹನ ಬಂದುದರಿಂದ ಸಿದ್ದೀಕ್ ಅವರು ತಮ್ಮ ವಾಹನವನ್ನು ಆರೋಪಿಯ ಸಮೀಪದಿಂದ ಚಲಾಯಿಸಿದ್ದಾರೆ. ಈ ವೇಳೆ ಶರತ್ ಅವಾಚ್ಯವಾಗಿ ಬೈದಿದ್ದಾನೆ. ನಂತರ ಸಿದ್ದೀಕ್ ಅವರು ವಾಹನ ಚಲಾಯಿಸುತ್ತಾ ಮುಂದೆ ಹೋದಾಗ ಅವರ ಹಿಂದಿನಿಂದ ಶರತ್ ಮೋಟಾರು ಬೈಕಿನಲ್ಲಿ ಹಿಂಬಾಲಿಸಿ ಬಂದು ಸಿದ್ದೀಕ್ ಅವರನ್ನು ತಡೆದು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾನೆ.

ಗಾಯಗೊಂಡ ಸಿದ್ದೀಕ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 100/2024003 0 126(2), 115(2), 352,351(2) BNS 2023 ರಡಿ ಪ್ರಕರಣ ದಾಖಲಾಗಿದೆ.

Related posts

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya
error: Content is protected !!