March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

ಉಜಿರೆ : “ಆರೋಗ್ಯದ ಕಡೆ ಗಮನಹರಿಸಿ. ಗೂಗಲ್ ವೈದ್ಯ ಹಾಗೂ ಗೂಗಲ್ ರೋಗಿ ಆಗಬೇಡಿ” ಎಂದು ಉಜಿರೆಯ ಎಸ್.ಡಿ.ಎಮ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಆರ್ಥೋಪೆಡಿಷನ್ ಡಾ. ಹೆಚ್ ಶತಾನಂದ ಪ್ರಸಾದ್ ರಾವ್ ಹೇಳಿದರು.

ಇವರು ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಆ.30 ರಂದು ರೋಟರಿ ಕ್ಲಬ್ ಹಾಗೂ ಶಾಲೆಯ ಇಂಟರಾಕ್ಟ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರೋಟರಿ ಕ್ಲಬ್ ನ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಶಿಕ್ಷಕಿ ಕಲ್ಯಾಣಿ ರಾವ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೋಹನ್ ನಿರೂಪಿಸಿ, ವಿದ್ಯಾರ್ಥಿನಿ ಇಶಿತ ಸ್ವಾಗತಿಸಿ ವಿದ್ಯಾರ್ಥಿ ಕುನಾಲ್ ವಂದಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya
error: Content is protected !!