September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

ಉಜಿರೆ : “ಆರೋಗ್ಯದ ಕಡೆ ಗಮನಹರಿಸಿ. ಗೂಗಲ್ ವೈದ್ಯ ಹಾಗೂ ಗೂಗಲ್ ರೋಗಿ ಆಗಬೇಡಿ” ಎಂದು ಉಜಿರೆಯ ಎಸ್.ಡಿ.ಎಮ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಆರ್ಥೋಪೆಡಿಷನ್ ಡಾ. ಹೆಚ್ ಶತಾನಂದ ಪ್ರಸಾದ್ ರಾವ್ ಹೇಳಿದರು.

ಇವರು ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಆ.30 ರಂದು ರೋಟರಿ ಕ್ಲಬ್ ಹಾಗೂ ಶಾಲೆಯ ಇಂಟರಾಕ್ಟ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರೋಟರಿ ಕ್ಲಬ್ ನ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಶಿಕ್ಷಕಿ ಕಲ್ಯಾಣಿ ರಾವ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸೋಹನ್ ನಿರೂಪಿಸಿ, ವಿದ್ಯಾರ್ಥಿನಿ ಇಶಿತ ಸ್ವಾಗತಿಸಿ ವಿದ್ಯಾರ್ಥಿ ಕುನಾಲ್ ವಂದಿಸಿದರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!