ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

Updated on:

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Leave a Comment

error: Content is protected !!