23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿಯನ್ನು ಮಚ್ಚಿನ ಗ್ರಾಮದಲ್ಲಿ ಸುಂದರ ಪೂಜಾರಿ ಅವರ ಕಟ್ಟಡದಲ್ಲಿ ಆ.29ರಂದು ಉದ್ಘಾಟನೆಗೊಂಡಿತು.

ಪ್ರಗತಿಪರ ಕೃಷಿಕರಾದ ಕೃಷ್ಣ ಪ್ರಭು ಮುದಲಡ್ಕ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾಗಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇರು ಮಾತನಾಡಿ ಒಂದೇ ಮನಸ್ಸಿನ ಸದಸ್ಯರು ಒಟ್ಟುಗೂಡಿ ಸಂಘವನ್ನು ರಚಿಸಿ ಉಳಿತಾಯ ಮಾಡಿ ಸಾಲವನ್ನು ಪಡೆದು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯರು ಪ್ರಮೋದ್ ಕುಮಾರ್, ಸದಸ್ಯರಾದ ಶುಭಕರ, ಡಾ. ಮಾಧವ ಕೆ ಶೆಟ್ಟಿ ಬಳ್ಳಮಂಜ, ವಲಯದ ಸೇವಾ ದೀಕ್ಷಿತೆಯರಾದ ಜಯಮಾಲಾ, ಪುಷ್ಪವತಿ, ಶಶಿಕಲಾ, ಸರೋಜಿನಿ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು, ವಲಯ ಸಂಯೋಜಕಿ ಸುಮಿತ್ರ ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಕಾರ್ಯಕಮ ನಿರೂಪಿಸಿ, ಪುರಂದರ ಸ್ವಾಗತಿಸಿದರು. ಮಚ್ಚಿನ ಗ್ರಾಮದ ಸೇವಾ ದೀಕ್ಷಿತೆ ಮಂಜುಳಾ ಶರ್ಮ ಧನ್ಯವಾದವಿತ್ತರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya
error: Content is protected !!