23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿಯನ್ನು ಮಚ್ಚಿನ ಗ್ರಾಮದಲ್ಲಿ ಸುಂದರ ಪೂಜಾರಿ ಅವರ ಕಟ್ಟಡದಲ್ಲಿ ಆ.29ರಂದು ಉದ್ಘಾಟನೆಗೊಂಡಿತು.

ಪ್ರಗತಿಪರ ಕೃಷಿಕರಾದ ಕೃಷ್ಣ ಪ್ರಭು ಮುದಲಡ್ಕ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾಗಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇರು ಮಾತನಾಡಿ ಒಂದೇ ಮನಸ್ಸಿನ ಸದಸ್ಯರು ಒಟ್ಟುಗೂಡಿ ಸಂಘವನ್ನು ರಚಿಸಿ ಉಳಿತಾಯ ಮಾಡಿ ಸಾಲವನ್ನು ಪಡೆದು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯರು ಪ್ರಮೋದ್ ಕುಮಾರ್, ಸದಸ್ಯರಾದ ಶುಭಕರ, ಡಾ. ಮಾಧವ ಕೆ ಶೆಟ್ಟಿ ಬಳ್ಳಮಂಜ, ವಲಯದ ಸೇವಾ ದೀಕ್ಷಿತೆಯರಾದ ಜಯಮಾಲಾ, ಪುಷ್ಪವತಿ, ಶಶಿಕಲಾ, ಸರೋಜಿನಿ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು, ವಲಯ ಸಂಯೋಜಕಿ ಸುಮಿತ್ರ ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಕಾರ್ಯಕಮ ನಿರೂಪಿಸಿ, ಪುರಂದರ ಸ್ವಾಗತಿಸಿದರು. ಮಚ್ಚಿನ ಗ್ರಾಮದ ಸೇವಾ ದೀಕ್ಷಿತೆ ಮಂಜುಳಾ ಶರ್ಮ ಧನ್ಯವಾದವಿತ್ತರು.

Related posts

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya
error: Content is protected !!