July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

ಮಚ್ಚಿನ : ಸಂಸ್ಕಾರ ಸಹಕಾರ ಸಂಘಟನೆ ಸಮೃದ್ಧಿಯ ಧ್ಯೇಯದೊಂದಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹುಟ್ಟು ಹಾಕಿದ ಸಂಸ್ಥೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ಇದರ ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿಯನ್ನು ಮಚ್ಚಿನ ಗ್ರಾಮದಲ್ಲಿ ಸುಂದರ ಪೂಜಾರಿ ಅವರ ಕಟ್ಟಡದಲ್ಲಿ ಆ.29ರಂದು ಉದ್ಘಾಟನೆಗೊಂಡಿತು.

ಪ್ರಗತಿಪರ ಕೃಷಿಕರಾದ ಕೃಷ್ಣ ಪ್ರಭು ಮುದಲಡ್ಕ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷರಾಗಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇರು ಮಾತನಾಡಿ ಒಂದೇ ಮನಸ್ಸಿನ ಸದಸ್ಯರು ಒಟ್ಟುಗೂಡಿ ಸಂಘವನ್ನು ರಚಿಸಿ ಉಳಿತಾಯ ಮಾಡಿ ಸಾಲವನ್ನು ಪಡೆದು ಒಳ್ಳೆಯ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯರು ಪ್ರಮೋದ್ ಕುಮಾರ್, ಸದಸ್ಯರಾದ ಶುಭಕರ, ಡಾ. ಮಾಧವ ಕೆ ಶೆಟ್ಟಿ ಬಳ್ಳಮಂಜ, ವಲಯದ ಸೇವಾ ದೀಕ್ಷಿತೆಯರಾದ ಜಯಮಾಲಾ, ಪುಷ್ಪವತಿ, ಶಶಿಕಲಾ, ಸರೋಜಿನಿ, ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಪ್ರಭು, ವಲಯ ಸಂಯೋಜಕಿ ಸುಮಿತ್ರ ಉಪಸ್ಥಿತರಿದ್ದರು.

ಹರೀಶ್ ಕುಮಾರ್ ಕಾರ್ಯಕಮ ನಿರೂಪಿಸಿ, ಪುರಂದರ ಸ್ವಾಗತಿಸಿದರು. ಮಚ್ಚಿನ ಗ್ರಾಮದ ಸೇವಾ ದೀಕ್ಷಿತೆ ಮಂಜುಳಾ ಶರ್ಮ ಧನ್ಯವಾದವಿತ್ತರು.

Related posts

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya
error: Content is protected !!