March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಈ ವೇಳೆ ಮರಕಡದಿಂದ -ಮಿಯಾರು ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು ಪಿಡಬ್ಲ್ಯೂಡಿ ಅಧಿಕಾರಿಗಳ ಬರದ ಹಿನ್ನಲೆಯಲ್ಲಿ ರಿಕ್ಷಾ ಚಾಲಕರು ಮತ್ತು ಗ್ರಾಮಸ್ಥರು ಅವರು ಗ್ರಾಮಸಭೆಗೆ ಬರಲೇಬೇಕು ಎಂದು ಹಠ ಹಿಡಿದು ಬರದಿದ್ದರೆ ಅವರು ಬರುವ ದಿನ ಗ್ರಾಮಸಭೆ ಮುಂದುವರಿಸುವಂತೆ ಹೇಳಿ ಹೋರಟರು.

ಅಷ್ಟರಲ್ಲಿ ಗ್ರಾ.ಪಂ. ಸದಸ್ಯ ಹರೀಶ್ ಕೆ.ಬಿ ಶಾಸಕ ಹರೀಶ್ ಪೂಂಜರಿಗೆ ಕರೆ ಮಾಡಿ ತಿಳಿಸಿ ಅವರು ಒಂದು ವಾರದೊಳಗೆ ರಸ್ತೆ ಸರಿಪಡಿಸುವಂತೆ ಭರವಸೆ ನೀಡಿದಂತೆ ಗ್ರಾಮಸಭೆಯು ಮುಂದುವರಿಯಿತು.

ಒಂದು ವಾರದೊಳಗೆ ರಸ್ತೆ ಸರಿಪಡಿಸದಿದ್ದರೆ ಪ್ರತಿಭಟನೆ ಮಾಡುವುದು ಅದಕ್ಕೆ ಗ್ರಾ.ಪಂ. ಸಹಕಾರ ನೀಡಬೇಕೆಂದು ಗ್ರಾಮಸ್ಥರು ಹೇಳಿದರು.

Related posts

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya
error: Content is protected !!