March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
error: Content is protected !!