ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
error: Content is protected !!