23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ರೂಪಿಸುವಲ್ಲಿ ಯಕ್ಷಗಾನ ಸಹಕಾರಿಯಾಗುತ್ತದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ). ಮಂಗಳೂರು. ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯಕ್ಷದ್ರುವ -ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನದಲ್ಲಿ ನೃತ್ಯ ಅಭ್ಯಾಸದೊಂದಿಗೆ ಸಿಗುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಜ್ಞಾನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್, ಕೋಶಾಧಿಕಾರಿ ಆದರ್ಶ್, ಯಕ್ಷಗಾನ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ ಉಪಸ್ಥಿತರಿದ್ದರು.


ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya
error: Content is protected !!