September 6, 2026
Uncategorized

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ರೂಪಿಸುವಲ್ಲಿ ಯಕ್ಷಗಾನ ಸಹಕಾರಿಯಾಗುತ್ತದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ). ಮಂಗಳೂರು. ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯಕ್ಷದ್ರುವ -ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನದಲ್ಲಿ ನೃತ್ಯ ಅಭ್ಯಾಸದೊಂದಿಗೆ ಸಿಗುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಜ್ಞಾನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್, ಕೋಶಾಧಿಕಾರಿ ಆದರ್ಶ್, ಯಕ್ಷಗಾನ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ ಉಪಸ್ಥಿತರಿದ್ದರು.


ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾಪ೯ಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya
error: Content is protected !!