26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಹೊಸ ಬಸ್ಸು ತಂಗುದಾನದ ಸಭಾಭವನದಲ್ಲಿ ನಡೆಯಿತು.

ಗ್ರಾಮಸಭೆಯ ಪ್ರಾರಂಭದಲ್ಲಿ ಅಗಲಿದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು.

ಭಾರಿ ಮಳೆಗೆ ಸರಕಾರಿ ಪ್ರೌಢ ಶಾಲೆ ವೇಣೂರು ಕುಸಿಯುವ ಹಂತಕ್ಕೆ ತಲುಪಿದೆ. ಶಾಲೆಯ ಕಂಪೌಂಡ್, ಗೋಡೆ,ಮಾಡು ಬೀಳುವ ಹಂತದಲ್ಲಿದೆ. ಒಂದು ವೇಳೆ ಬರೆ ಬಿದ್ದು ಪ್ರೌಢ ಶಾಲೆ ನೆಲಸಮವಾದರೆ ವಿದ್ಯಾರ್ಥಿಗಳ ಗತಿಯೇನು. ಇಗಾಗಲೇ ರಾತ್ರಿ 1.30 ಗಂಟೆ ತನಕ ಮಕ್ಕಳ ಹೆತ್ತವರು, ಊರುವವರು ಶ್ರಮದಾನ ಮಾಡುತ್ತಿದ್ದರೆ. ಶಾಲೆಯ ಪ್ರೌಢ ಶಾಲೆ ದುರಸ್ಥಿಗೆ ಪಂಚಾಯತ್ ನಿಂದ ಕೂಡಲೇ 5 ಲಕ್ಷದ ಚೆಕ್ ನೀಡಬೇಕೆಂದು ಮಾಜಿ ಗ್ರಾ.ಪಂ ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಒತ್ತಾಯಿಸಿದರು.

ಮಂಗಗಳ ಹಾವಳಿಯಿಂದ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ವೇಣೂರಿನಲ್ಲಿ ಮಂಕಿ ಪಾರ್ಕ್ ನಿರ್ಮಿಸಲು ಗ್ರಾಮಸ್ಥರು ಒತ್ತಾಯಿಸಿದರು.

ಮಲೆನಾಡು ಪ್ರದೇಶದಲಿ ಮಂಗಳ ಹಾವಳಿಯಿದೆ. ಇದರ ಬಗ್ಗೆ ವಿಧಾನಸಭೆಯಲ್ಲಿಯೂ ಚರ್ಚೆಗಳು ನಡೆದಿವೆ ಎಂದು ವಲಯ ಅರಣ್ಯ ಅಧಿಕಾರಿ ತಿಳಿಸಿದರು.

ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ಆಚಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್, ಸದಸ್ಯರಾದ ಸುಮ,ಮಾಲತಿ,ಅರುಣ ಹೆಗ್ಡೆ,ಜಿನ್ನು,ಶೈಲಜಾ,ಸುಂದರ ಹೆಗ್ಡೆ,ಅನೂಪ್ ಜೆ ಪಾಯಸ್,ವೀಣಾ , ನೇಮಯ್ಯ, ಹರೀಶ್, ಶುಭ, ಸುಚಿತ್ರಾ, ಜಯಂತಿ, ದಿನೇಶ, ವಸಂತಿ, ಸಂಭಾಷಿಣಿ, ಅರುಣಾ ಕ್ರಾಸ್ತ,ಡಿ.ಪುಷ್ಪಾ,ಲೀಲಾವತಿ, ಸುಜಾತ, ಲೋಕಯ್ಯ ಪೂಜಾರಿ,ಸುನೀಲ್ ಕುಮಾರ್ ಪಿ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು,ಗ್ರಾಮಸ್ಥರು ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಅನುಪಾಲನ ವರದಿ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ವನಜ ಸ್ವಾಗತಿಸಿದರು.ದ್ವೀತಿಯ ದರ್ಜೆ ಲೆಕ್ಕ ಸಹಾಯಕ ರಾಜು ಜಮಾಖರ್ಚಿನ ವಿವಿರ ನೀಡಿದರು.

Related posts

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!