37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya
error: Content is protected !!