23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Related posts

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!