September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Related posts

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!